ವೆಂಕಟೇಶ್ ಹತ್ಯೆಗೆ ಕಾರಣರಾದ ಭರತ್. ಸಲೀಂ. ಮೈಲಾರಿ. ಧನರಾಜ್ ಪೊಲೀಸರ ವಶಕ್ಕೆ.

08/10/2025 4:49 PM Total Views: 95162

Gouse Dafedar

ವೆಂಕಟೇಶ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

ಭೀಮ ಅಲಿಯಾಸ್ ಭರತ್,

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

ಸಲೀಂ,

Advertisement Image

ವಿಜಯ್,

ಧನರಾಜ್ ಈ ನಾಲ್ವರು ಕಂಪ್ಲಿ ಪೊಲೀಸರಿಗೆ ತಾವಾಗಿಯೇ

ಶರಣಾಗಿದ್ದು  ಇನ್ನಿಬ್ಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಂಗಾವತಿ ಪೊಲೀಸರು ಶರಣಾದ ಆರೋಪಿಗಳನ್ನು ಕಂಪ್ಲಿ ಠಾಣೆಯಿಂದ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿ 2 ವರ್ಷಗಳ ಹಿಂದೆ ಎರಡು ಗುಂಪುಗಳ ನಡುವಿನ ಕೋಲ್ಡ್ ವಾರ್ ಕಾರಣವಿರಬಹುದೆಂದು ಶಂಕಿಸಲಾಗಿದೆ. ಗಂಗಾವತಿಯಲ್ಲಿ ರವಿ ಮತ್ತು ವೆಂಕಟೇಶ್ ಗುಂಪುಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ಈ ಘರ್ಷಣೆ ವೆಂಕಟೇಶ್‌ ಹತ್ಯೆಗೆ ಕಾರಣವಾಗಿರಬಹುದೆಂದು ಪೊಲೀಸರು ತಿಳಿದಿದ್ದಾರೆ.

 

ಕುಟುಂಬದ ಆಕ್ರಂದನ

 

ಈ ಘಟನೆಯಿಂದ ವೆಂಕಟೇಶ್‌ರ ಕುಟುಂಬ ಆಘಾತಕ್ಕೊಳಗಾಗಿದೆ. ತಮ್ಮ ಏಕೈಕ ಮಗನನ್ನು ಕಳೆದುಕೊಂಡ ತಂದೆ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ತಮ್ಮ ಮಗನನ್ನು ಕೊಲೆ ಮಾಡಿದ ಆರೋಪಿಗಳನ್ನು ನಮ್ಮ ವಶಕ್ಕೆ ಒಪ್ಪಿಸಿ ಬಿಡಿ ಎಂದು ತಮ್ಮ ನೋವನ್ನು ಹೊರಹಾಕಿದರು.

ಈಘಟನೆಯಿಂದ ಗಂಗಾವತಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಈ ದ್ವೇಷ ಇನ್ನೂ ಎಷ್ಟು ಜನರನ್ನು ಬಲಿ ತಗೆದು ಕೊಳ್ಳುತ್ತದೆಯೋ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

WhatsApp Icon
Subscribe My YouTube