24/11/2025 11:05 AM Total Views: 95086

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ಸರ್ಕಾರಿ ಹೊರ ಗುತ್ತಿಗೆ ನೌಕರರ ರಾಜ್ಯ ಉಪಾಧ್ಯಕ್ಷರಾಗಿ ಸಲ್ಮಾನಖಾನ ಮಾಳೆಕೊಪ್ಪ ಆಯ್ಕೆ
ಕೊಪ್ಪಳ : ಕನಕಗಿರಿ ತಾಲೂಕಿನ ಸಿ ಡಿ ಪಿ ಓ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿರುವ ಹೊರ ಗುತ್ತಿಗೆ ನೌಕರ ಸಲ್ಮಾನ್ ಖಾನ ಮಾಳೆಕೊಪ್ಪ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪದ್ಯಾಕ್ಷರಾಗಿ ಆಯ್ಕೆಯಾದ ಸಲ್ಮಾನ ಖಾನ ಮಾಳೆಕೊಪ್ಪ ಮಾತನಾಡಿ ಸರ್ಕಾರಿ ಹೊರ ಗುತ್ತಿಗೆ ನೌಕರರ ಹಿತ ಕಾಯುವ ದೃಷ್ಟಿಯಿಂದ ನನ್ನನ್ನು ಈ ಸ್ಥಾನಕ್ಕೆ ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷರು ಆಯ್ಕೆ ಮಾಡಿದ್ದಾರೆ ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಮೂಲಕ ರಾಜ್ಯದಲ್ಲಿ ಹೊರಗುತ್ತಿಗೆ ನೌಕರರ ಮೇಲೆ ಆಗುತ್ತಿರುವ ಅನ್ಯಾಯಗಳ ಮೇಲೆ ಧ್ವನಿ ಎತ್ತುವ ಮೂಲಕ ಪ್ರತಿಯೊಂದು ಸಮಸ್ಯೆಗಳನ್ನೂ ನಮ್ಮ ಸಂಘಟನೆ ಮೂಲಕ ಸರ್ಕಾರದ ಗಮನಕ್ಕೆ ತರುವುದರ ಮೂಲಕ ಹಾಗೂ ಸಂಘಟನೆಯನ್ನು ಬಲಿಷ್ಠಗೊಳಿಸುವ ಪ್ರಯತ್ನ ಮಾಡುತ್ತೇನೆ ಎಂದು ಈ ಸಂಧರ್ಭದಲ್ಲಿ ಹೇಳಿದರು.














